ಬ್ರೇಕಿಂಗ್ ನ್ಯೂಸ್
17-04-24 10:14 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಕಷ್ಟು ಪ್ಲ್ಯಾನ್ ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಮಗಳನ್ನ ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ. ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನ ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನ ಜನರಿಗೆ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಒಬ್ಬ ಸ್ವಾಮಿಜಿ ಜೊತೆಗೆ ಮಾತನಾಡಿ ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯನವರನ್ನು ಇಳಿಸಲು ನಮಗೆ ಲಿಂಗಾಯತರು ಸಪೋರ್ಟ್ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪರವಾದ ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿಕೊಂಡಿದ್ದು ಚುನಾವಣೆ ಮುಗಿದ 15 ದಿನದಲ್ಲೇ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಲಿಂಗಾಯತರು, ಒಕ್ಕಲಿಗರು ಒಂದು ಎಂಬ ಸಂದೇಶ ಕೊಡಲು ಒಬ್ಬ ಸ್ವಾಮೀಜಿ ಪ್ರಯತ್ನ ಮಾಡಿದ್ದಾರೆ.
ಅದಕ್ಕೆ ಶಿವಾನಂದ ಪಾಟೀಲ ಅವರ ಮಗಳನ್ನು ಗೆಲ್ಲಿಸಿದರೆ, ಶಿವಾನಂದ ಪಾಟೀಲ ಹಾಗೂ ನಾನು ಸೇರಿ ಎಲ್ಲ ಸಿದ್ದರಾಮಯ್ಯನವರನ್ನು ಇಳಿಸುವ ಕಾರ್ಯತಂತ್ರ ಮಾಡಿದ್ದೇವೆ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ ಯತ್ನಾಳ್, ಕಾಂಗ್ರೆಸ್ ಇನ್ನು ಒಡೆದು ಹೋಗಿ ಹೊಸ ಸರ್ಕಾರ ರಚನೆಯಾಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯನವರಿಗೆ ಒಂದು ಕಿವಿಮಾತು ಹೇಳುತ್ತೇನೆ. ನೀವು ಡಿ.ಕೆ ಶಿವಕುಮಾರ್ ಪರವಾದ ಅಭ್ಯರ್ಥಿ ಗಳನ್ನು ಸೋಲಿಸದಿದ್ದರೆ ನಿಮ್ಮ ಮುಖ್ಯಮಂತ್ರಿ ಹುದ್ದೆ ಹೋಗುವದು ಗ್ಯಾರಂಟಿ. ಐದು ಗ್ಯಾರಂಟಿಗಳ ಜೊತೆಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಹೋಗುವುದು ಇದೊಂದು ಗ್ಯಾರಂಟಿ ಎಂದರು. ಬಾಗಲಕೋಟೆಯಲ್ಲಿ ಶಿವಾನಂದ ಪಾಟೀಲ, ಧಾರವಾಡದಲ್ಲಿ ಕೆಲವರು, ಬೆಳಗಾವಿ ಲೋಕಸಭಾ ಅಭ್ಯರ್ಥಿ ಡಿಕೆಶಿ ಬೆಂಬಲಿಗರು ಇದ್ದಾರೆ. ಅವರನ್ನು ನೀವು ಸೋಲಿಸಲೇ ಬೇಕು. ಇರದಿದ್ದರೆ ನಿಮ್ಮ ಸಿಎಂ ಹುದ್ದೆ ಹೋಗುವದು ಗ್ಯಾರಂಟಿ ಎಂದರು ಯತ್ನಾಳ.
ದೇಶಕ್ಕೆ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಪರ್ಯಾಯ ನಾಯಕ ಇಲ್ಲ ಎಂಬುದು ಜನರಿಗೆ ತಿಳಿದಿದೆ. ಪ್ರತಿಯೊಬ್ಬರ ತಲೆಯಲ್ಲಿ ಮೋದಿ ಮತ್ತು ಬಿಜೆಪಿ ಇದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಮೊದಲು ತಲೆಯಿಂದ ಜಾತಿ ಕಿತ್ತೊಗೆಯಿರಿ. ಮೋದಿಯವರು ಬಂದರೆ ಸನಾತನ ಧರ್ಮ ಉಳಿಯುತ್ತದೆ. ನಮ್ಮ ಜಾತಿಗಳು ಇರುತ್ತವೆ. ಎಲ್ಲ ಸಮುದಾಯದವರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.
Bjp MLA Basavanagouda Yatnal has said that DK Shivakumar will be the new Chief Minister of Karnataka within 15 days of the conclusion of the Lok Sabha elections.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm