ಬ್ರೇಕಿಂಗ್ ನ್ಯೂಸ್
17-04-24 10:14 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಕಷ್ಟು ಪ್ಲ್ಯಾನ್ ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಮಗಳನ್ನ ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ. ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನ ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನ ಜನರಿಗೆ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಒಬ್ಬ ಸ್ವಾಮಿಜಿ ಜೊತೆಗೆ ಮಾತನಾಡಿ ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯನವರನ್ನು ಇಳಿಸಲು ನಮಗೆ ಲಿಂಗಾಯತರು ಸಪೋರ್ಟ್ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪರವಾದ ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿಕೊಂಡಿದ್ದು ಚುನಾವಣೆ ಮುಗಿದ 15 ದಿನದಲ್ಲೇ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಲಿಂಗಾಯತರು, ಒಕ್ಕಲಿಗರು ಒಂದು ಎಂಬ ಸಂದೇಶ ಕೊಡಲು ಒಬ್ಬ ಸ್ವಾಮೀಜಿ ಪ್ರಯತ್ನ ಮಾಡಿದ್ದಾರೆ.
ಅದಕ್ಕೆ ಶಿವಾನಂದ ಪಾಟೀಲ ಅವರ ಮಗಳನ್ನು ಗೆಲ್ಲಿಸಿದರೆ, ಶಿವಾನಂದ ಪಾಟೀಲ ಹಾಗೂ ನಾನು ಸೇರಿ ಎಲ್ಲ ಸಿದ್ದರಾಮಯ್ಯನವರನ್ನು ಇಳಿಸುವ ಕಾರ್ಯತಂತ್ರ ಮಾಡಿದ್ದೇವೆ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ ಯತ್ನಾಳ್, ಕಾಂಗ್ರೆಸ್ ಇನ್ನು ಒಡೆದು ಹೋಗಿ ಹೊಸ ಸರ್ಕಾರ ರಚನೆಯಾಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯನವರಿಗೆ ಒಂದು ಕಿವಿಮಾತು ಹೇಳುತ್ತೇನೆ. ನೀವು ಡಿ.ಕೆ ಶಿವಕುಮಾರ್ ಪರವಾದ ಅಭ್ಯರ್ಥಿ ಗಳನ್ನು ಸೋಲಿಸದಿದ್ದರೆ ನಿಮ್ಮ ಮುಖ್ಯಮಂತ್ರಿ ಹುದ್ದೆ ಹೋಗುವದು ಗ್ಯಾರಂಟಿ. ಐದು ಗ್ಯಾರಂಟಿಗಳ ಜೊತೆಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಹೋಗುವುದು ಇದೊಂದು ಗ್ಯಾರಂಟಿ ಎಂದರು. ಬಾಗಲಕೋಟೆಯಲ್ಲಿ ಶಿವಾನಂದ ಪಾಟೀಲ, ಧಾರವಾಡದಲ್ಲಿ ಕೆಲವರು, ಬೆಳಗಾವಿ ಲೋಕಸಭಾ ಅಭ್ಯರ್ಥಿ ಡಿಕೆಶಿ ಬೆಂಬಲಿಗರು ಇದ್ದಾರೆ. ಅವರನ್ನು ನೀವು ಸೋಲಿಸಲೇ ಬೇಕು. ಇರದಿದ್ದರೆ ನಿಮ್ಮ ಸಿಎಂ ಹುದ್ದೆ ಹೋಗುವದು ಗ್ಯಾರಂಟಿ ಎಂದರು ಯತ್ನಾಳ.
ದೇಶಕ್ಕೆ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಪರ್ಯಾಯ ನಾಯಕ ಇಲ್ಲ ಎಂಬುದು ಜನರಿಗೆ ತಿಳಿದಿದೆ. ಪ್ರತಿಯೊಬ್ಬರ ತಲೆಯಲ್ಲಿ ಮೋದಿ ಮತ್ತು ಬಿಜೆಪಿ ಇದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಮೊದಲು ತಲೆಯಿಂದ ಜಾತಿ ಕಿತ್ತೊಗೆಯಿರಿ. ಮೋದಿಯವರು ಬಂದರೆ ಸನಾತನ ಧರ್ಮ ಉಳಿಯುತ್ತದೆ. ನಮ್ಮ ಜಾತಿಗಳು ಇರುತ್ತವೆ. ಎಲ್ಲ ಸಮುದಾಯದವರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.
Bjp MLA Basavanagouda Yatnal has said that DK Shivakumar will be the new Chief Minister of Karnataka within 15 days of the conclusion of the Lok Sabha elections.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm