ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm