ಬ್ರೇಕಿಂಗ್ ನ್ಯೂಸ್
20-04-24 10:36 pm Bangalore Correspondent ಕರ್ನಾಟಕ
ಬೆಂಗಳೂರು, ಏ 20: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಮಾತನಾಡಿ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ, ಖಂಡನೀಯ ಎಂದು ತಿಳಿಸಿದರು.
ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.
ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು, ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಜೆಪಿಯವರ ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದು ಹೇಳಿದರು.
CM Siddaramaiah slams BJP for making use of Neha murder politically, says really feeling bad to use someone's death politically he added.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm