ಬ್ರೇಕಿಂಗ್ ನ್ಯೂಸ್
20-04-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.20: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಇದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ ಮತ್ತು ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಒಂದು 5000 ಮತಗಳನ್ನು ಪಡೆಯುತ್ತಾರೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ತೆಗಳುತ್ತಿದ್ದರು. ಇದೀಗ ಒಳ್ಳೆಯ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದರೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿಯನ್ನು ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೋಢಿಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.
Dingaleswara Swamiji has received a payment to contest from Dharwad Lok Sabha constituency. He contested elections for this. Mla Basanagouda Patil Yatnal said that he will reveal who made the payment after May 7.
04-05-24 04:04 pm
HK News Desk
Honnavar Accident: ಹೊನ್ನಾವರ ; ಗೇರುಸೊಪ್ಪ ಬಳಿ ಧ...
04-05-24 10:29 am
HD Revanna, Lookout notice: ಕೊರಳು ಸುತ್ತಿಕೊಂಡ...
03-05-24 10:19 pm
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
04-05-24 03:41 pm
HK News Desk
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
04-05-24 12:41 pm
Mangalore Correspondent
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
04-05-24 12:23 pm
HK News Desk
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm