ಬ್ರೇಕಿಂಗ್ ನ್ಯೂಸ್
23-04-24 10:11 am Bangalore Correspondent ಕರ್ನಾಟಕ
ಬೆಂಗಳೂರು, ಏ 23: ಶಕ್ತಿ ಯೋಜನೆಯಿಂದ ರಾಜ್ಯದ ಕೋಟ್ಯಂತರ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದು, ಯೋಜನೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ನಡುವೆ ಶಕ್ತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯೊಬ್ಬರು, ಉಚಿತ ಪ್ರಯಾಣದ ಟಿಕೆಟ್ಗಳಿಂದ ಮಾಡಿದ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಭಿನ್ನ ರೀತಿಯಲ್ಲಿ ಸನ್ಮಾನಿಸಿರುವುದು ಗಮನ ಸೆಳೆದಿದೆ.
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ, ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿ ಗೌರವಿಸಿದ್ದಾರೆ. ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಪರ ಅರಸೀಕೆರೆಯಲ್ಲಿ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳಿದ್ದಾಗ ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ ಫ್ರೀ ಟಿಕೆಟ್ ಹಾರವನ್ನು ಸಿಎಂ ಅವರಿಗೆ ಅರ್ಪಿಸಿದ್ದಾರೆ.


ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದಕೊಂಡರು.
ವಿದ್ಯಾರ್ಥಿನಿ ಉಚಿತ ಟಿಕೆಟ್ಗಳ ಹಾರ ಹಾಕಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.
Crores of women in the state are travelling free of cost in transport buses under the Shakti scheme and the scheme is being widely appreciated by the public. Meanwhile, a student, who is availing the benefits of shakti scheme, felicitated Chief Minister Siddaramaiah in a different way with a garland made of free travel tickets.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm