ಬ್ರೇಕಿಂಗ್ ನ್ಯೂಸ್
23-04-24 02:29 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಈ ಬಾರಿ ಚುನಾವಣೆಯಲ್ಲಿ ಮತದಾರರು ಜಾಗ್ರತೆಯಿಂದ ಮತ ಹಾಕದೇ ಇದ್ದರೆ ಮತ್ತೊಮ್ಮೆ ನಾವು ಪಾರದರ್ಶಕ ಚುನಾವಣೆ ಎದುರಿಸುತ್ತೇವೆ ಎನ್ನುವ ನಂಬಿಕೆ ಇಲ್ಲ. ಆರ್ಥಿಕ ಅಸಮಾನತೆ ಇದೇ ರೀತಿ ಮುಂದುವರಿದರೆ ಮಣಿಪುರದಲ್ಲಾದ ಹಿಂಸಾಚಾರ ದೇಶದ ಇತರ ಭಾಗಗಳಿಗೂ ಹಬ್ಬುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಆರ್ಥಿಕ ಅಸಮಾನತೆ ಹೆಚ್ಚುತ್ತಿದ್ದು, ಇದರ ಪರಿಣಾಮ ಎಲ್ಲ ಕ್ಷೇತ್ರ, ಜನರ ಮೇಲೂ ಆಗಲಿದೆ. ನಿಮ್ಮ ಮನೆ ಬಾಗಿಲಿಗೆ ಬಿಸಿ ತಟ್ಟಲ್ಲ ಎಂದುಕೊಳ್ಳಬೇಡಿ. ಹಾಲಿ ಆಡಳಿತಕ್ಕೆ ಶಿಕ್ಷೆಯಾಗಬೇಕು. ದೊಡ್ಡ ಮಟ್ಟದ ಆರ್ಥಿಕ ಅಸಮಾನತೆ ಸೃಷ್ಟಿಸಿರುವುದಕ್ಕೆ ಉತ್ತರದಾಯಿ ಮಾಡಬೇಕಿದೆ. ರಾಜ್ಯ- ಕೇಂದ್ರ ಒಕ್ಕೂಟ ವ್ಯವಸ್ಥೆ ಮತ್ತು ದೇಶದಲ್ಲಿ ಜಾತ್ಯತೀತ ತತ್ವಗಳಿಗೆ ಧಕ್ಕೆ ತಂದಿರುವುದಕ್ಕೆ ಶಿಕ್ಷೆ ನೀಡಬೇಕಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಇದಕ್ಕೆ ತಕ್ಕ ಶಿಕ್ಷೆ ನೀಡದೇ ಇದ್ದರೆ, ಇಂತಹ ಅಸಮಾನತೆ ಮತ್ತಷ್ಟು ಮುಂದುವರಿಯುವ ಸಾಧ್ಯತೆಯಿದೆ ಎಂದಿದ್ದಾರೆ.
ಸರಕಾರ ನೀಡುತ್ತಿರುವ ದತ್ತಾಂಶಗಳ ಬಗ್ಗೆ ನಂಬಿಕೆ ಇಲ್ಲ. ಅದನ್ನು ತಪ್ಪಾಗಿ ತೋರಿಸುತ್ತಿರಲೂಬಹುದು. ದೇಶದ ಇಕಾನಮಿ ಬಗ್ಗೆ ಅರ್ಥ ಮಾಡಲು ಐದು ತಿಂಗಳ ಹಿಂದೆ ಬೇಳೆ ಇನ್ನಿತರ ವಸ್ತುಗಳ ಬೆಲೆ ಎಷ್ಟಿತ್ತು, ಈಗ ಎಷ್ಟಿದೆ ಎನ್ನುವುದನ್ನು ಅರ್ಥ ಮಾಡಿಕೊಂಡರೆ ಸಾಕು. ದೇಶದಲ್ಲಿ ಸಾಮಾನ್ಯ ಮಧ್ಯಮ ವರ್ಗದ ಜನರ ಉಳಿಕೆಯ ಮೊತ್ತ ದಾಖಲೆಯ 5 ಶೇಕಡಾಕ್ಕೆ ಕುಸಿದಿದೆ. ಇದೇ ವೇಳೆ, ಸಾಮಾನ್ಯ ಜನರ ಸಾಲದ ಪ್ರಮಾಣ 40 ಶೇಕಡಕ್ಕೆ ಏರಿದೆ ಎಂದು ಪರಕಾಲ ಹೇಳಿದ್ದಾರೆ.
ನಮ್ಮ ದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶ, ಜಗತ್ತಿನ ಐದನೇ ದೊಡ್ಡ ಆರ್ಥಿಕತೆ ಎಂದು ಬಿಂಬಿಸಲಾಗುತ್ತಿದೆ. ನಾವು ಅಭಿವೃದ್ಧಿ ಹೊಂದಿರುವ ಇಂಗ್ಲೆಂಡ್ ಆರ್ಥಿಕತೆಯನ್ನು ಹಿಮ್ಮೆಟ್ಟಿಸಿದ್ದರೆ ನಾವು ಯಾಕೆ ಅಭಿವೃದ್ಧಿ ಹೊಂದಿದ ರಾಷ್ಟ್ರ ಎಂದು ಹೇಳಿಕೊಳ್ಳಬಾರದು. ಅಭಿವೃದ್ಧಿಗೆ ಯಾಕೆ 2047ರ ಗಡಿಯನ್ನು ಹಾಕಿರುವುದು ಎಂದು ಪರಕಾಲ ಪ್ರಭಾಕರ್ ಪ್ರಶ್ನೆ ಮಾಡಿದ್ದಾರೆ.
NOTED political economist and author, Dr. Parakala Prabhakar, has warned that if Prime Minister Narendra Modi is re-elected in the ensuing Lok Sabha election, the country’s map could change drastically, leading to nationwide turmoil. Glimpses of what would be in store for the country are being seen in Ladakh and Manipur now which are reeling under extreme confusion, uncertainty, and a lack of order.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm