ಬ್ರೇಕಿಂಗ್ ನ್ಯೂಸ್
24-04-24 11:14 pm HK News Desk ಕರ್ನಾಟಕ
ಕಲಬುರಗಿ, ಏ 24: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಅಫ್ಜಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮತ ಹಾಕೋಕೆ ಬರದೇ ಇದ್ದರು ನಾನು ಸತ್ತರೆ ನಮ್ಮ ಕೆಲಸ ನೆನಪು ಮಾಡಿಕೊಂಡು ಮಣ್ಣು ಹಾಕೋಕೆ ಬನ್ನಿ. ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ ಬನ್ನಿ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ. ಆವಾಗ ನೋಡಪ್ಪ ಆತನ ಮಣ್ಣಿಗೆ ಎಷ್ಟು ಜನ ಬಂದ್ರು ಅಂತಾನಾದ್ರು ಹೇಳಬೇಕು ಎಂದು ಹೇಳುತ್ತಾ ಭಾವುಕರಾಗಿದ್ದಾರೆ.
ನನಗೆ ಕಳೆದ ಬಾರಿ ಸೋಲಾಯ್ತು ಆಗಲಿ, ಸೋಲಾದ್ರು ದೊಡ್ಡ ಸ್ಥಾನ ಸಿಕ್ಕಿದೆ. ನಿಮ್ಮ ವೋಟು ನನಗೆ ತಪ್ಪಿದ್ರೆ ನಿಮ್ಮ ಹೃದಯ ಗೆಲ್ಲೋದಕ್ಕೆ ನನಗೆ ಸಾಧ್ಯ ಆಗಲಿಲ್ಲ ಅಂತಾ ತಿಳಿದುಕೊಳ್ಳುತ್ತೇನೆ ಎಂದರು.
ಕಾಂಗ್ರೆಸ್ನವರು ದೇಶಕ್ಕಾಗಿ ಪ್ರಾಣ ಸಹ ಕೊಟ್ಟಿದ್ದಾರೆ. ಇವರ ಮನೆಯಲ್ಲಿ ಒಂದು ಇಲಿ ಸಹ ಸತ್ತಿಲ್ಲ. ಕಾಂಗ್ರೆಸ್ ಸಂವಿಧಾನ ಉಳಿಸುವ ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಅವರು ಸೋಲೆ ಸೋಲುತ್ತಾರೆ. ವಾರಣಾಸಿಯಲ್ಲಿ ಗೆಲ್ಲುವುದಕ್ಕೆ ದಾರಿ ಮಾಡಿಕೊಂಡಿದ್ದಾರೆ. ಅಬ್ ಕೀ ಬಾರ್ 400 ಪಾರ್ ಅಂತಾರೆ. ಆದರೆ ನಾವು 200 ಸಹ ಪಾರ್ ಮಾಡಲ್ಲ. ಅದನ್ನ ನಾವು ತಡೆಯುವುದರಲ್ಲಿ ಎರಡು ಮಾತಿಲ್ಲ ಎಂದರು.
ನಾನು ಹುಟ್ಟಿದೆ ರಾಜಕಾರಣಕ್ಕಾಗಿ ಹೀಗಾಗಿ ಕೊನೆ ಚುನಾವಣೆ ಇಲ್ಲ. ರಿಟೈಡ್ ಆಗುವುದೇ ಇಲ್ಲ ಸಂವಿಧಾನ ಉಳಿಸಲು ತತ್ವ. ಇದನ್ನು ಉಳಿಸಲು ಕೊನೆ ಉಸಿರು ಇರುವವರೆಗೆ ಹೋರಾಟ ನಡೆಸುತ್ತೇವೆ. ನಾಳೆ ಸಿದ್ದರಾಮಯ್ಯ ಸಿಎಂ ಸಾಕು ರಿಟೈಡ್ ಅಂತಾ ಸಹ ಅನ್ನಬಹುದು. ಆದರೆ ತತ್ವ ಸಿದ್ಧಾಂತಗಳಿಗಾಗಿ ಕೊನೆಯುಸಿರು ಇರುವರೆಗೆ ಹೋರಾಟ ನಡೆಸುವುದಾಗಿ ಖರ್ಗೆ ಹೇಳಿದರು.
Seeking to strike an emotional chord with the people of his home district of Kalaburagi, Congress President M Mallikarjun Kharge on Wednesday appealed to them to at least attend his funeral if they thought he worked for them
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm