ಬ್ರೇಕಿಂಗ್ ನ್ಯೂಸ್
25-04-24 09:57 pm HK News Desk ಕರ್ನಾಟಕ
ಕೊಪ್ಪಳ, ಏ 25: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ.
ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೋ ಎಂದು ಪ್ರಶ್ನಿಸಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಆಡಳಿತ ಮತ್ತು ವಿಪಕ್ಷದವರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.
ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಈ ಇಬ್ಬರು ನಾಯಕರ ನಡುವಿನ ವಾಕ್ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26ರಂದು ಜರುಗಲಿದ್ದು, ಎರಡಣೇ ಹಂತದ ಮತದಾನವು ಮೇ 07ರಂದು ನಡೆಯಲಿದೆ.
ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ;
ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು! ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ ಅಂತ ಟೀಕಿಸಿದ್ದಾರೆ.
Shivaraj Tangadagi says will make Janardhana Reddy naked publically. This statement was made by Tangadagi after Reddy made a controversy remark on shivaraj.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm