ಬ್ರೇಕಿಂಗ್ ನ್ಯೂಸ್
25-04-24 09:57 pm HK News Desk ಕರ್ನಾಟಕ
ಕೊಪ್ಪಳ, ಏ 25: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ.
ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೋ ಎಂದು ಪ್ರಶ್ನಿಸಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಆಡಳಿತ ಮತ್ತು ವಿಪಕ್ಷದವರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.
ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಈ ಇಬ್ಬರು ನಾಯಕರ ನಡುವಿನ ವಾಕ್ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26ರಂದು ಜರುಗಲಿದ್ದು, ಎರಡಣೇ ಹಂತದ ಮತದಾನವು ಮೇ 07ರಂದು ನಡೆಯಲಿದೆ.
ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ;
ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು! ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ ಅಂತ ಟೀಕಿಸಿದ್ದಾರೆ.
Shivaraj Tangadagi says will make Janardhana Reddy naked publically. This statement was made by Tangadagi after Reddy made a controversy remark on shivaraj.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm