ಬ್ರೇಕಿಂಗ್ ನ್ಯೂಸ್
25-04-24 09:57 pm HK News Desk ಕರ್ನಾಟಕ
ಕೊಪ್ಪಳ, ಏ 25: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ.
ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೋ ಎಂದು ಪ್ರಶ್ನಿಸಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಆಡಳಿತ ಮತ್ತು ವಿಪಕ್ಷದವರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.
ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಈ ಇಬ್ಬರು ನಾಯಕರ ನಡುವಿನ ವಾಕ್ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26ರಂದು ಜರುಗಲಿದ್ದು, ಎರಡಣೇ ಹಂತದ ಮತದಾನವು ಮೇ 07ರಂದು ನಡೆಯಲಿದೆ.
ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ;
ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು! ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ ಅಂತ ಟೀಕಿಸಿದ್ದಾರೆ.
Shivaraj Tangadagi says will make Janardhana Reddy naked publically. This statement was made by Tangadagi after Reddy made a controversy remark on shivaraj.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm