ಬ್ರೇಕಿಂಗ್ ನ್ಯೂಸ್
26-04-24 04:53 pm HK News Desk ಕರ್ನಾಟಕ
ಚಾಮರಾಜನಗರ, ಏ, 26: ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು ಇದೀಗ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಇಂದು ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಮೂಲಸೌಕರ್ಯಕ್ಕೆ ಆಗ್ರಹಿಸಿ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಬಳಿಕ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ತಾವು ಮತದಾನ ಮಾಡಲ್ಲವೆಂದು ಗ್ರಾಮಸ್ಥರೆಲ್ಲ ಸೇರಿ ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ.
ಘಟನೆಗೆ ಕಾರಣವೇನು?:
ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ, ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Angry over politicians for no development in Village, angry people destroy Poll Booth In Chamarajanagar by villagers.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm