ಬ್ರೇಕಿಂಗ್ ನ್ಯೂಸ್
28-04-24 03:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಹಾಸನದಲ್ಲಿ ಹೊರಬಿದ್ದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಪೆನ್ ಡ್ರೈವ್ ಬಗ್ಗೆ ವ್ಯಂಗ್ಯ ಪ್ರಶ್ನೆಯನ್ನು ಎತ್ತಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಚುನಾವಣೆ ವೇಳೆಗೆ ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕುಮಾರಣ್ಣ ಅವರು ತಮ್ಮ ಜೇಬಿನಲ್ಲೇ ಪೆನ್ ಡ್ರೈವ್ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನೇ ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು. ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ್ ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯದ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿ ಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ ಎಂದರು.
DK shivakumar slams Prajwal Revanna over his sex leaked videos, says that the pen drive kumarswami was showing was of Prajwal Revanna he added.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm