ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm