ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm