ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm