ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.
ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm