ಬ್ರೇಕಿಂಗ್ ನ್ಯೂಸ್
30-04-24 11:31 am HK News Desk ಕರ್ನಾಟಕ
ಕಣ್ಣೂರು, ಏ.30: ಕಾರು - ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.






ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.
ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five people, including a boy, were killed in a collision involving a car and a lorry at Punnachery in Kannapuram, Kannur Monday night. The deceased have been identified as K N Padmakumar (59), a native of Kalichanadukkam, Bheemanadi-native Choorikkatt Sudhakaran (52), his wife Ajitha (35), father-in-law Kozhummal Krishnan (65) and Ajitha's nephew Akash (nine).
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm