ಬ್ರೇಕಿಂಗ್ ನ್ಯೂಸ್
30-04-24 11:31 am HK News Desk ಕರ್ನಾಟಕ
ಕಣ್ಣೂರು, ಏ.30: ಕಾರು - ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.






ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.
ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five people, including a boy, were killed in a collision involving a car and a lorry at Punnachery in Kannapuram, Kannur Monday night. The deceased have been identified as K N Padmakumar (59), a native of Kalichanadukkam, Bheemanadi-native Choorikkatt Sudhakaran (52), his wife Ajitha (35), father-in-law Kozhummal Krishnan (65) and Ajitha's nephew Akash (nine).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm