ಬ್ರೇಕಿಂಗ್ ನ್ಯೂಸ್
30-04-24 11:31 am HK News Desk ಕರ್ನಾಟಕ
ಕಣ್ಣೂರು, ಏ.30: ಕಾರು - ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.






ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.
ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five people, including a boy, were killed in a collision involving a car and a lorry at Punnachery in Kannapuram, Kannur Monday night. The deceased have been identified as K N Padmakumar (59), a native of Kalichanadukkam, Bheemanadi-native Choorikkatt Sudhakaran (52), his wife Ajitha (35), father-in-law Kozhummal Krishnan (65) and Ajitha's nephew Akash (nine).
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm