ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm