ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm