ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm