ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
21-05-24 05:02 pm
HK News Desk
ಹಣ ವಸೂಲಿ ಆರೋಪ ; ಹೊಯ್ಸಳ ಪೊಲೀಸರನ್ನೇ ಕಳ್ಳ , ಕಳ್ಳ...
21-05-24 02:43 pm
H D Kumaraswamy, congress phone tapping, Praj...
20-05-24 07:03 pm
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
21-05-24 01:33 pm
HK News Desk
Pune porsche accident; ಕುಡಿದ ಮತ್ತಿನಲ್ಲಿ ಪೋರ್ಶ...
20-05-24 08:15 pm
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
21-05-24 07:15 pm
Udupi Correspondent
Mangalore accident, Shiradi Ghat: ಶಿರಾಡಿ ಘಾಟಿ...
21-05-24 11:56 am
Harish Poonaja, Controversy, Mangalore: ಬಿಜೆಪ...
20-05-24 10:43 pm
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
21-05-24 05:52 pm
HK News Desk
Mysuru Congress leader murder, Vidhya: ಕೌಟುಂಬ...
21-05-24 01:28 pm
Vijayapura crime, truck attack: ವಿಜಯಪುರ ; ಕ್ಯ...
18-05-24 04:05 pm
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm