Kumaraswamy, DK shivakumar, prajwal Revanna: ಪ್ರಜ್ವಲ್‌ ರೇವಣ್ಣ ವಿಡಿಯೋವನ್ನ ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದ ಡಿಕೆಶಿ ಅಂಡ್ ಸುರೇಶ ; ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ , ಚಿಲ್ಲರೆ ಅಣ್ಣ - ತಮ್ಮ , 420ಗಳು ಅವ್ರು ಎಂದು ಉಗಿದ ಎಚ್‌ಡಿಕೆ*

02-05-24 10:20 am       Bangalore Correspondent   ಕರ್ನಾಟಕ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್  ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್‌ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.

ಪ್ರಜ್ವಲ್‌ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.

Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.