ಬ್ರೇಕಿಂಗ್ ನ್ಯೂಸ್
02-05-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಕರ್ನಾಟಕದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಆಯ್ಕೆ ಮಾಡಲು ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಇದೇ ಜೂನ್ 3ರಂದು ಆರು ಸ್ಥಾನಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವುದಕ್ಕೂ ಮುನ್ನ ರಾಜ್ಯದಲ್ಲಿ ಪರಿಷತ್ತಿನ ಸ್ಥಾನಕ್ಕಾಗಿ ಕಾಂಗ್ರೆಸ್- ಬಿಜೆಪಿ ನಡುವೆ ಜಟಾಪಟಿಗೆ ಮತ್ತೊಂದು ವೇದಿಕೆ ಸಿದ್ಧವಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಸದಸ್ಯ ಡಾ.ಚಂದ್ರಶೇಖರ ಬಿ. ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯ ಆಯನೂರು ಮಂಜುನಾಥ್ (2023 ಎಪ್ರಿಲ್ 19ರಂದು ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು), ಬೆಂಗಳೂರು ಪದವೀಧರ ಕ್ಷೇತ್ರದ ಸದಸ್ಯ ಎ.ದೇವೇಗೌಡ, ದಕ್ಷಿಣ – ಪೂರ್ವ ಕ್ಷೇತ್ರದ ಡಾ.ವೈ.ಎ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದ ಎಸ್.ಎಲ್.ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇ ಗೌಡ(2024 ಮಾರ್ಚ್ 23ರಂದು ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು) ಇವರ ಸದಸ್ಯತ್ವ ಅವಧಿ ಇದೇ ಜೂನ್ 21ಕ್ಕೆ ಕೊನೆಯಾಗಲಿದ್ದು, ಅದಕ್ಕೂ ಮುನ್ನ ಆ ಸ್ಥಾನಗಳನ್ನು ತುಂಬಿಸಲು ಚುನಾವಣೆ ಘೋಷಿಸಲಾಗಿದೆ.
ಮೂರು ಪವವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಸದಸ್ಯರ ಚುನಾವಣೆಗೆ ಇದೇ ಮೇ 9ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನಾಂಕವಾಗಿದ್ದು, 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆ ದಿನವಾಗಿದೆ. ಜೂನ್ 3ರಂದು ಸೋಮವಾರ ಬೆಳಗ್ಗೆ 8ರಿಂದ ಸಂಜೆ ನಾಲ್ಕು ಗಂಟೆಯ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು, ಜೂನ್ 12ರ ಮೊದಲು ಒಟ್ಟು ಚುನಾವಣಾ ಪ್ರಕ್ರಿಯೆ ಮುಗಿಯಲಿದೆ.
ಕಣಕ್ಕಿಳಿಯುವವರು ಯಾರ್ಯಾರು ?
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ಸಿನ ಹಾಲಿ ಸದಸ್ಯ ಭೋಜೇಗೌಡ ಮತ್ತೆ ಸ್ಪರ್ಧಿಸಲು ತಯಾರಿ ನಡೆಸಿದ್ದರೆ, ಬಿಜೆಪಿಯಿಂದ ಮಂಗಳೂರಿನ ಸಹಕಾರಿ ಭಾರತಿ ಮುಖಂಡ ಹರೀಶ್ ಆಚಾರ್ಯ ಸ್ಪರ್ಧಾ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ನೈರುತ್ಯ ಪದವೀಧರ ಕ್ಷೇತ್ರದಿಂದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಇರುವುದರಿಂದ ಯಾವ ಸೀಟು ಯಾರಿಗೆ ಸಿಗುತ್ತೆ ಎನ್ನುವುದು ಕುತೂಹಲ ಮೂಡಿಸಿದೆ. ಬಿಜೆಪಿ ಬಿಟ್ಟಿರುವ ಆಯನೂರು ಮಂಜುನಾಥ್ ಪದವೀಧರ ಕ್ಷೇತ್ರದಿಂದ ಮತ್ತೆ ಆಯ್ಕೆ ಬಯಸಿದ್ದಾರೆ. ಇತ್ತೀಚೆಗೆ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಮರಿತಿಬ್ಬೇ ಗೌಡ ಕೂಡ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವ ಸಾಧ್ಯತೆಯಿದೆ.
Karnataka Legislative Council Election Schedule June 3rd, may 16th nomination
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm