ಬ್ರೇಕಿಂಗ್ ನ್ಯೂಸ್
03-05-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ಇಂದು ಕೂಡ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ಕೆಲವೆಡೆ ಮಳೆಯಾಗಿತ್ತು.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.




ಸ್ಯಾಂಕಿ ರಸ್ತೆ, ಸದಾಶಿವನaಗರ ಬಳಿ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂ ಭಾಗದಲ್ಲೂ ಮಳೆ ಜೋರಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಆನೇಕಲ್ ನಲ್ಲಿ ಮೊದಲ ಮಳೆಯೇ ಭರ್ಜರಿಯಾಗಿ ಬರುತ್ತಿದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮುಖದಲ್ಲಿ ಸಂತಸ ಮೂಡಿದೆ. ಅಲ್ಲದೇ ಮಳೆಯಿಂದಾಗಿ ರೈತರ ಮುಖದಲ್ಲಿಯೂ ಮಂದಹಾಸ ಮೂಡಿದೆ.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಾಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. 4 ರಿಂದ ಐದು ಸೆಂಮೀ ಮಳೆಯಾಗಿದ್ದರೆ ತಾಪಮಾನ ಕಡಿಮೆ ಆಗುತ್ತಾ ಇದ್ದು, ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆ ಅಷ್ಟೇ ಆಗಿದೆ.
ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ ;
ಏಪ್ರಿಲ್ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
After experiencing dry weather for the last six months, Bengaluru finally received rainfall on May 2 bringing relief to the parched Bengalureans. As per Varuna Mitra, the city recorded 4.3 mm of rainfall at 8.45 pm on Thursday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm