ಬ್ರೇಕಿಂಗ್ ನ್ಯೂಸ್
03-05-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ಇಂದು ಕೂಡ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ಕೆಲವೆಡೆ ಮಳೆಯಾಗಿತ್ತು.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.




ಸ್ಯಾಂಕಿ ರಸ್ತೆ, ಸದಾಶಿವನaಗರ ಬಳಿ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂ ಭಾಗದಲ್ಲೂ ಮಳೆ ಜೋರಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಆನೇಕಲ್ ನಲ್ಲಿ ಮೊದಲ ಮಳೆಯೇ ಭರ್ಜರಿಯಾಗಿ ಬರುತ್ತಿದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮುಖದಲ್ಲಿ ಸಂತಸ ಮೂಡಿದೆ. ಅಲ್ಲದೇ ಮಳೆಯಿಂದಾಗಿ ರೈತರ ಮುಖದಲ್ಲಿಯೂ ಮಂದಹಾಸ ಮೂಡಿದೆ.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಾಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. 4 ರಿಂದ ಐದು ಸೆಂಮೀ ಮಳೆಯಾಗಿದ್ದರೆ ತಾಪಮಾನ ಕಡಿಮೆ ಆಗುತ್ತಾ ಇದ್ದು, ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆ ಅಷ್ಟೇ ಆಗಿದೆ.
ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ ;
ಏಪ್ರಿಲ್ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
After experiencing dry weather for the last six months, Bengaluru finally received rainfall on May 2 bringing relief to the parched Bengalureans. As per Varuna Mitra, the city recorded 4.3 mm of rainfall at 8.45 pm on Thursday.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm