ಬ್ರೇಕಿಂಗ್ ನ್ಯೂಸ್
03-05-24 04:29 pm HK News Desk ಕರ್ನಾಟಕ
ಮೈಸೂರು, ಮೇ.3: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.
ಕೆಆರ್ ನಗರ ಠಾಣೆಗೆ ದೂರು ನೀಡಿದ್ದು ಅಶ್ಲೀಲ ವಿಡಿಯೊದಲ್ಲಿ ತನ್ನ ತಾಯಿ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಆಕೆಯ ಪುತ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದಾಗಿದ್ದಾರೆ. ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿ ಚಿತ್ರವೂ ಇದೆ. ವಿಡಿಯೋ ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಹೆಚ್ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A, 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಹಾಗೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ನಮೂದಿಸಲಾಗಿದೆ.
ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬವರು, ಭವಾನಿ ರೇವಣ್ಣ ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ರೇವಣ್ಣ ತೋಟದ ಮನೆಗಳಿಗೆ ಎಸ್ಐಟಿ ದಾಳಿ
ಇದೇ ವೇಳೆ, ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.
Trouble seems to be mounting for former Minister and JD(S) leader H. D. Revanna. He has now been booked for kidnapping one of the alleged victims of sexual abuse by his son Prajwal Revanna, who is the MP of Hassan and the candidate of the BJP-led NDA in this Lok Sabha election.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm