ಬ್ರೇಕಿಂಗ್ ನ್ಯೂಸ್
03-05-24 10:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಒಂದರ ಮೇಲೊಂದು ಕೇಸು ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ತೀವ್ರ ಸಂಕಷ್ಟಕ್ಕೆ ತುತ್ತಾಗುತ್ತಲೇ ಯಾರ ಕೈಗೂ ಸಿಗದೇ ತಲೆಮರೆಸಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಹಾಸನ ಮತ್ತು ಬೆಂಗಳೂರಿನ ಮನೆಗಳಿಗೆ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಅಧಿಕಾರಿಗಳು ಬಂಧಿಸುತ್ತಾರೆಂಬ ಭೀತಿಯಲ್ಲಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ.
ಅತ್ಯಾಚಾರ, ಅಪಹರಣ, ಕಿರುಕುಳ ಆರೋಪದಲ್ಲಿ ತಂದೆ, ಮಗನ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು ಎಸ್ಐಟಿ ತನಿಖೆಗೆ ಮಹತ್ತರ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋ ಪ್ರಕರಣ ಕುರಿತಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ವಿಚಾರಣೆ ಮಾಡಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಕಷ್ಟು ಮಾಹಿತಿ, ಸಾಕ್ಷ್ಯಗಳನ್ನೂ ಕಲೆಹಾಕಿದ್ದಾರೆ. ಈಗಾಗಲೇ ಎಸ್ಐಟಿ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಬರದೆ ದೂರ ನಿಂತಿದ್ದಾರೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದರಿಂದ ಅವರ ವಿರುದ್ಧ ಲುಕೌಟ್ ನೋಟೀಸ್ ಜಾರಿಯಾಗಿದೆ. ಇದೀಗ ಎಚ್.ಡಿ. ರೇವಣ್ಣ ಕೂಡ ವಿದೇಶಕ್ಕೆ ಪರಾರಿಯಾಗುತ್ತಾರೆ ಎಂಬ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎರಡನೇ ಪ್ರಕರಣ ದಾಖಲಾಗುತ್ತಲೇ ರೇವಣ್ಣ ತಲೆಮರೆಸಿಕೊಂಡಿದ್ದು, ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಇದೇ ವೇಳೆ, ವಿಚಾರಣೆಗೆ ಬರದಿದ್ದರೆ ರೇವಣ್ಣ ಅವರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿರುವುದು ಆರೋಪಿಗಳಿಗೆ ಬಿಸಿ ಮುಟ್ಟಿಸಿದೆ.
ಮೈಸೂರಿನಲ್ಲಿದ್ದ ಮನೆ ಕೆಲಸದಾಕೆಯನ್ನು ಭವಾನಿ ರೇವಣ್ಣ ಅವರ ಆಪ್ತ ಸತೀಶ್ ಬಾಬು ಎಂಬಾತ ಅಪಹರಿಸಿರುವ ಬಗ್ಗೆಯೂ ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಮಗನೇ ದೂರು ನೀಡಿದ್ದು, ಅಶ್ಲೀಲ ವಿಡಿಯೋದಲ್ಲಿ ತಾಯಿಯದ್ದೂ ಇದೆ. ಮೇ 1ರಂದು ಸತೀಶ್ ಬಾಬು ಮೈಸೂರಿಗೆ ಬಂದು ಭವಾನಿ ರೇವಣ್ಣ ಕರೆದುಕೊಂಡು ಬರಲು ಹೇಳಿದ್ದಾರೆಂದು ತಿಳಿಸಿ ತನ್ನ ತಾಯಿಯನ್ನು ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಐದು ವರ್ಷಗಳ ಕಾಲ ಹೊಳೆನರಸೀಪುರದಲ್ಲಿದ್ದಾಗ ಮಹಿಳೆ ರೇವಣ್ಣ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಪೊಲೀಸರು ಸತೀಶ್ ಬಾಬುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Sex scandal case, HD Revanna chances of flying abroad, lookout notice issued.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm