ಬ್ರೇಕಿಂಗ್ ನ್ಯೂಸ್
05-05-24 10:54 pm HK News Desk ಕರ್ನಾಟಕ
ಬೆಂಗಳೂರು, ಮೇ 05: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿ ಇರಿಸಿದ ಆರೋಪದ ಮೇಲೆ ಶಾಸಕ ರೇವಣ್ಣ ಅವರನ್ನ ಬಂಧಿಸಿರುವುದು ಸರಿಯಾದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಅಲ್ಲದೇ, ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದಲೇ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಜತೆ ಚರ್ಚಿಸುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವಾಗ ನಡೆದಿವೆ ಎಂಬ ಬಗ್ಗೆ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಜತೆಗೆ ಇದೇ ಮೊದಲ ಬಾರಿ ಚುನಾವಣಾ ಮೈತ್ರಿ ಏರ್ಪಟ್ಟಿದೆ. ಜೆಡಿಎಸ್ ತನ್ನ ಕೋಟಾದಲ್ಲಿ ಪ್ರಜ್ವಲ್ಗೆ ಟಿಕೆಟ್ ಕೊಟ್ಟಿದೆ. ಅವರ ಮೇಲೆ ಆರೋಪ ಕೇಳಿ ಬಂದ ಬಳಿಕ ಅವರನ್ನು ಜೆಡಿಎಸ್ ಅಮಾನತು ಮಾಡಿದೆ ಎಂದರು.
ಈಗ ಪ್ರಜ್ವಲ್ ಅವರನ್ನು ಅತ್ಯಾಚಾರಿ ಎಂದು ಕರೆಯುವ ಸಿದ್ದರಾಮಯ್ಯ 2019 ರ ಏಪ್ರಿಲ್ನಲ್ಲಿ ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹಾಡಿ ಹೊಗಳಿದ್ದರು. ‘ಪ್ರಜ್ವಲ್ ಯುವ ನಾಯಕ, ಓಡಾಡಿ ಕೆಲಸ ಮಾಡ್ತಾರೆ. ಆದ್ದರಿಂದ ಅವರಿಗೇ ಮತ ನೀಡಿ ಗೆಲ್ಲಿಸಿಕೊಡಿ ಎಂದು ಟ್ವೀಟ್ ಮಾಡಿದ್ದರು. ಈ ಮೂಲಕ ಪ್ರಜ್ವಲ್ ಪರ ಕೆಲಸ ಮಾಡಿ ಸಿದ್ದರಾಮಯ್ಯ ಮತವನ್ನು ಯಾಚಿಸಿದ್ದರು ಎಂದು ಅಶೋಕ ಹೇಳಿದರು.
ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕರಣವನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಅವರು ತಿಳಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
BJP R Ashok says Revanna arrest has been a right move by congress government. In case if Prajwal wins this coming lok sabha elections the party also will take right action against him he added.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm