ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 08:41 pm
HK News Desk
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm