ಬ್ರೇಕಿಂಗ್ ನ್ಯೂಸ್
09-05-24 11:39 am Bengaluru Correspondent ಕರ್ನಾಟಕ
ಬೆಂಗಳೂರು, ಮೇ.9: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ ಎಂಟು ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ. 73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಪಡೆದಿದ್ದಾರೆ. ನಗರ ಪ್ರದೇಶದಲ್ಲಿ 3.59 ಲಕ್ಷ ಮಂದಿ (ಶೇ. 72.83) ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ 2.71 ಲಕ್ಷ (ಶೇ. 74.17) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಸರ್ಕಾರಿ ಶಾಲೆಯ 2.43 ಲಕ್ಷ ಮಂದಿ (ಶೇ. 72.46) ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅನುದಾನಿತ 1.50 ಲಕ್ಷ ಮಂದಿ ಅಂದರೆ ಶೇಕಡಾ 72.22 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅನುದಾನರಹಿತ ಶಿಕ್ಷಣ ಸಂಸ್ಥೆಗಳ 2.23 ಲಕ್ಷ ವಿದ್ಯಾರ್ಥಿಗಳು (ಶೇ. 86.46) ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ಈ ಬಾರಿ ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ, ಶಿವಮೊಗ್ಗ ಮೂರು ಮತ್ತು 4ನೇ ಸ್ಥಾನದಲ್ಲಿ ಕೊಡುಗು ಜಿಲ್ಲೆಯಿದೆ. ದಕ್ಷಿಣ ಕನ್ನಡ ಜಿಲ್ಲೆ 92.12%, ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ಪರ್ಸಂಟೇಜ್ ಪಡೆದಿದೆ. ಒಟ್ಟು 625ಕ್ಕೆ 624 ಅಂಕವನ್ನು 7 ವಿದ್ಯಾರ್ಥಿಗಳು, 623 ಅಂಕಗಳನ್ನು 14 ವಿದ್ಯಾರ್ಥಿಗಳು, 622 ಅಂಕವನ್ನು 21 ವಿದ್ಯಾರ್ಥಿಗಳು, 621 ಅಂಕವನ್ನು 44 ವಿದ್ಯಾರ್ಥಿಗಳು ಮತ್ತು 620 ಅಂಕವನ್ನು 64 ವಿದ್ಯಾರ್ಥಿಗಳು ಪಡೆದಿದ್ದಾರೆ.
ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್
625ಕ್ಕೆ 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮೇದಾ ಪಿ. ಶೆಟ್ಟಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
SSLC results 2024, Udupi first, mangalore secures second place. Udupi and Dakshina Kannada have secured the first and second place in the state respectively. with 94% and 92.12% pass percentages respectively.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm