ಬ್ರೇಕಿಂಗ್ ನ್ಯೂಸ್
10-05-24 02:32 pm HK News Desk ಕರ್ನಾಟಕ
ಗಂಗಾವತಿ, ಮೇ.10: ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್ ಕಡೆಯಿಂದ ನಿರ್ಮಿಸಿರುವುದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶವನ್ನು ಉಲ್ಲಂಘಿಸಿದಂತೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಗಂಗಾವತಿಯ ಜಯನಗರದಲ್ಲಿ ಸತ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ. ಅದನ್ನು ಯಾರೇ ಹೇಳಲಿ, ಅದು ಸುಪ್ರೀಂ ಕೋರ್ಟ್ ಉಲ್ಲಂಘನೆ ಎಂದರು.
ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ನಡೆಸುತ್ತಿರುವ ಹಿಂದು ದೇವಾಲಯಗಳನ್ನು ಆಯಾ ಪ್ರದೇಶಗಳಲ್ಲಿ ಇರುವ ಹಿಂದೂಗಳಿಗೆ ನಿರ್ವಹಣೆ ಹಾಗೂ ಆಡಳಿತದ ಹೊಣೆ ನೀಡಬೇಕು ಎಂದವರು ಆಗ್ರಹಿಸಿದರು. ದೇಶದಲ್ಲಿರುವ ಬಹುತೇಕ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಗಳಿಗೆ ಆಡಳಿತದ ಹೊಣೆ ನೀಡಲಾಗಿದೆ. ಆದರೆ, ಹಿಂದೂಗಳ ದೇವಾಲಯಗಳ ಆಡಳಿತವನ್ನು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಸರಕಾರ ನಿಯಂತ್ರಣ ಮಾಡುತ್ತಿದೆ. ಇದು ಸರಿಯಾದ ನಿಯಮವಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಒಳಪಡುವ ದೇವಾಲಯಗಳನ್ನು ಅವರದೇ ಆಡಳಿತಕ್ಕೆ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸರಕಾರ ಎಲ್ಲಿಯೂ ಈ ಆದೇಶವನ್ನು ಜಾರಿಗೆ ತರುತ್ತಿಲ್ಲ. ಇದು ತಕ್ಷಣದಿಂದ ಜಾರಿಗೆ ಬರಬೇಕು. ಅಷ್ಟೇ ಅಲ್ಲದೆ, ಹಿಂದೂಗಳ ಸಂಖ್ಯೆ ಕುಸಿಯುತ್ತಿದ್ದು ಇದರ ಬಗ್ಗೆ ಯೋಚನೆ ಮಾಡಬೇಕಾಗಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯಿದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ಬೇಗನೆ ಈ ಮಸೂದೆ ಮಂಡನೆಯಾಗಿ ಜಾರಿಗೆ ಬರಬೇಕು ಎಂದರು.
ಶತಮಾನಗಳಿಂದ ಕಂಡಿದ್ದ ಮಂದಿರ ನಿರ್ಮಾಣದ ಕನಸು ಸದ್ಯ ನನಸಾಗಿದೆ. ಇಲ್ಲಿಗೆ ನಮ್ಮ ಕೆಲಸ ಮುಗಿಯಿತು ಎಂದು ಸುಮ್ಮನೆ ಕುಳಿತುಕೊಳ್ಳುವಂತಿಲ್ಲ. ಮಂದಿರ ನಿರ್ಮಾಣ ಮಾಡಿದ್ದು, ದೊಡ್ಡ ಕಾರ್ಯವಲ್ಲ. ಅದನ್ನು ಸೂರ್ಯ ಚಂದ್ರರು ಇರುವವರೆಗೂ ಉಳಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಮಂದಿರದ ಮೇಲೆ ಯಾವುದೇ ರೀತಿ ದಾಳಿಯಾಗದಂತೆ, ಮಂದಿರಕ್ಕೆ ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವುದು ಪ್ರತಿಯೊಬ್ಬ ಭಾರತೀಯ, ಅದರಲ್ಲೂ ಪ್ರತಿಯೊಬ್ಬ ಹಿಂದೂವಿನ ಕೆಲಸವಾಗಿದೆ. ಹಿಂದುಗಳು ಹಿಂದುಗಳಾಗಿಯೇ ಉಳಿದರಷ್ಟೇ ಈ ಮಂದಿರ ಉಳಿಯುತ್ತದೆ ಎಂದು ಸ್ವಾಮೀಜಿ ಹೇಳಿದರು.
It was not the central government that built the Ram temple in Ayodhya. Constructed by the Hindu Trust as per the order of the Supreme Court. Vishwaprasanna Theertha Swamiji of Pejawar Mutt, Udupi, said that the demolition of ram temple in Ayodhya is a violation of the Supreme Court's order.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm