ಬ್ರೇಕಿಂಗ್ ನ್ಯೂಸ್
10-05-24 06:07 pm HK News Desk ಕರ್ನಾಟಕ
ಮೈಸೂರು, ಮೇ.10: ರಾಜ್ಯದ ಎಲ್ಲಾ ಕ್ರಿಮಿನಲ್ ಕೇಸುಗಳನ್ನು ನಮ್ಮ ಪೊಲೀಸರು ತನಿಖೆ ನಡೆಸುತ್ತಾರೆ. ಎಸ್ ಐಟಿ ಎಂದರೆ ನಮ್ಮ ಪೊಲೀಸರೇ ತನಿಖೆ ನಡೆಸುವುದು, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ, ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ತನಿಖೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸು ಕೊಡಲಿಲ್ಲ. ಬಿಜೆಪಿಯವರು ಸಿಬಿಐಗೆ ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು.
ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ ಏನು, ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತಿದೆ ಎಂಬ ನಂಬಿಕೆ ನನಗಿದೆ. ನಾನು ಯಾವತ್ತೂ ಪೊಲೀಸರಿಗೆ ಕಾನೂನಿಗೆ ವಿರುದ್ಧವಾಗಿ ತನಿಖೆ ಮಾಡಿ ಎಂದು ಹೇಳುವುದಿಲ್ಲ. ಎಸ್ ಐಟಿ ಮೇಲೆ ನಂಬಿಕೆ ಇದೆ, ನಮ್ಮ ಪೊಲೀಸ್ ಮೇಲೆ ಅವರಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದರು.
ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸು, ಕೆಜೆ ಜಾರ್ಜ್ ಕೇಸು, ಡಿಕೆ ರವಿ ಕೇಸು ಕೊಟ್ಟಿದ್ದೆವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ, ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ, ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು.
ಯಾರ ಹಸ್ತಕ್ಷೇಪವೂ ಇಲ್ಲ ;
ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ಯಾರ ಹಸ್ತಕ್ಷೇಪ, ಒತ್ತಡವಿಲ್ಲ, ನಾನಾಗಲಿ, ಡಿ ಕೆ ಶಿವಕುಮಾರ್ ಆಗಲಿ ಮಧ್ಯೆಪ್ರವೇಶಿಸುತ್ತಿಲ್ಲ, ಪ್ರಭಾವ ಬೀರುತ್ತಿಲ್ಲ, ತನಿಖೆಯ ಹಾದಿ ತಪ್ಪಿಸುತ್ತಲೂ ಇಲ್ಲ, ಸತ್ಯಾಸತ್ಯತೆ ಹೊರಬರುತ್ತದೆ. ಪ್ರಕರಣಕ್ಕೆ ಅಂತಾರಾಷ್ಟ್ರೀಯ ಸಂಪರ್ಕ ಇದೆ ಎಂಬುದೆಲ್ಲಾ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರಷ್ಟೆ ಎಂದರು.
Karnataka Chief Minister Siddaramaiah on Friday ruled out the possibility of handing over the investigations into the sex assault cases against Janata Dal (Secular) MP Prajwal Revanna to the Central Bureau of Investigation (CBI).
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm