ಬ್ರೇಕಿಂಗ್ ನ್ಯೂಸ್
11-05-24 05:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ವಿಧಾನ ಪರಿಷತ್ತಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯೇ ಮುಂದುವರಿಯುವುದು ಖಚಿತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಹಾಗೂ ಜೆಡಿಎಸ್ಸಿಗೆ ಎರಡು ಸ್ಥಾನ ಹಂಚಿಕೆಯಾಗಲಿದೆ.
ಲೋಕಸಭೆ ಚುನಾವಣೆ ಪೂರ್ವದಲ್ಲಿ ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯಲ್ಲಿ 4-3 ಸ್ಥಾನಗಳ ಹಂಚಿಕೆ ಬಗ್ಗೆ ನಿರ್ಧಾರವಾಗಿತ್ತು. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಆಗಿರುವ ನಿರ್ಧಾರದಂತೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ಸಿನ ಎಪಿ ರಂಗನಾಥ್ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೈತ್ರಿ ಪ್ರಕಾರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಜೆಡಿಎಸ್ಸಿನ ಎಸ್.ಎಲ್. ಭೋಜೇಗೌಡ ಅವರೇ ಅಭ್ಯರ್ಥಿಯಾಗೋದು ಖಚಿತ. ಹಾಗೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಜೆಡಿಎಸ್ ಪಡೆಯುವ ಸಾಧ್ಯತೆ ಇದ್ದು, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಸೇರಿದಂತೆ ಕೆಲವರು ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಹೊಸಮುಖ ಎ.ಎಚ್.ಆನಂದ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ರಘುಪತಿ ಭಟ್, ವಿಕಾಸ್ ಪುತ್ತೂರು ಹೆಸರು ಮುಂಚೂಣಿಯಲ್ಲಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರ ಕರಾವಳಿಯ ಐದು ಜಿಲ್ಲೆಗಳನ್ನು ಒಳಗೊಂಡಿದ್ದು, ಬಿಜೆಪಿ ಪ್ರಾಬಲ್ಯದ ಕ್ಷೇತ್ರ. ಆದರೆ, ಈ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟು ಕೊಡುವುದಕ್ಕೆ ಸ್ಥಳೀಯ ಬಿಜೆಪಿ ನಾಯಕರ ವಿರೋಧ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋಜೇಗೌಡ ಬಗ್ಗೆ ವಿರೋಧಿ ಅಲೆಯಿದ್ದು, ಬಿಜೆಪಿಯಿಂದ ಬಹುತೇಕ ಬಂಡಾಯ ಅಭ್ಯರ್ಥಿ ಸ್ಪರ್ಧಿಸುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿರುವ ಮಾಜಿ ಶಾಸಕ ಸಿಟಿ ರವಿ ಬಹಿರಂಗವಾಗಿಯೇ ಭೋಜೇಗೌಡರ ಬಗ್ಗೆ ವಿರೋಧಿ ನಿಲುವು ಹೊಂದಿದ್ದು, ಜೆಡಿಎಸ್ ಗೆಲುವು ಈ ಕ್ಷೇತ್ರದಲ್ಲಿ ಸುಲಭ ಇಲ್ಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮುರಿದುಕೊಳ್ಳಬೇಕು ಎನ್ನುವ ನಿಲುವು ಈ ಭಾಗದ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರಲ್ಲಿದ್ದು ಚುನಾವಣೆಯಲ್ಲಿ ಪ್ರಭಾವ ಬೀರಲಿದೆ.
Former Chief Minister BS Yediyurappa has confirmed that the BJP-JD(S) alliance will continue in the elections to the Legislative Council from the teachers' and graduates' constituencies.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm