ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm