ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm