ಬ್ರೇಕಿಂಗ್ ನ್ಯೂಸ್
11-05-24 09:46 pm HK News Desk ಕರ್ನಾಟಕ
ಶಿವಮೊಗ್ಗ, ಮೇ.11: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಪಿ ದಿನೇಶ್ ಪಕ್ಷೇತರ ಸ್ಪರ್ಧಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಟಿಕೆಟನ್ನು ಬಿಜೆಪಿ ಬಿಟ್ಟು ಬಂದಿರುವ ಆಯನೂರು ಮಂಜುನಾಥ್ ಪಡೆಯುವುದು ಖಾತ್ರಿಯಾಗಿದ್ದು ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್, ಬಂಡಾಯ ಸಾರಿದ್ದಾರೆ.
ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. 2006 ರಿಂದ ನಾನು ತಯಾರಿ ಮಾಡಿಕೊಂಡು ಬಂದಿದ್ದೇನೆ. ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದೆ. ಈ ಬಾರಿ ಸ್ಪರ್ಧೆಗಾಗಿ ಈಗಾಗಲೇ ಎಲ್ಲ ತಯಾರಿ ಮಾಡಿಕೊಂಡಿದ್ದೇನೆ.
ಡಿ.ಕೆ ಶಿವಕುಮಾರ್ ಈ ಬಾರಿಯೂ ಟಿಕೆಟ್ ಕೊಡುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಡಿಕೆಶಿ ಭರವಸೆ ಮಾತಿನಂತೆ ಎಲ್ಲಾ ಕಡೆ ಪ್ರವಾಸ ಮಾಡಿದ್ದೇನೆ. ಆದರೆ ಈಗ ಕಾಂಗ್ರೆಸ್ ಪಕ್ಷ ಬೇರೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ನಾನು ಒಂದು ಹೆಜ್ಜೆ ಮುಂದಿಟ್ಟಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇನೆ. ಪಕ್ಷ ನಿಷ್ಠೆ ಇರುವ ವ್ಯಕ್ತಿಗೆ ಟಿಕೆಟ್ ನೀಡಬೇಕು. ಪಕ್ಷದಿಂದ ಪಕ್ಷಕ್ಕೆ ಹಾರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಸರಿಯಲ್ಲ. ಪಕ್ಷ ನಿಷ್ಠೆಯ ವ್ಯಕ್ತಿಗೆ ಟಿಕೆಟ್ ನೀಡಿದರೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಮೇ 15ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಸ್.ಪಿ. ದಿನೇಶ್ ಹೇಳಿದರು.
ಅಭ್ಯರ್ಥಿ ಬದಲಾವಣೆ ಮಾಡಲು ಇನ್ನೂ ಅವಕಾಶ ಇದೆ. ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ ಅವರು, ಅತಿಥಿ ಉಪನ್ಯಾಸಕರ ಬೆಂಬಲ ನನಗಿದೆ. ಯಾವುದೇ ಪಕ್ಷದ ಮುಖಂಡರೂ ನನಗೆ ಸಂಪರ್ಕಿಸಿಲ್ಲ ಎಂದಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಕಾಂಗ್ರೆಸ್ ಒಳಗಿನ ಬಂಡಾಯ ಬಿಜೆಪಿಗೆ ಪ್ಲಸ್ ಆಗಲಿದೆ. ಕಳೆದ ಬಾರಿ ಈ ಕ್ಷೇತ್ರವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
SP Dinesh, who was seeking a Congress ticket from south-west graduate constituency, is contesting as an independent candidate. Ayanur Manjunath, who has quit the BJP, is likely to get the Congress ticket. Dinesh has rebelled.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm