ಬ್ರೇಕಿಂಗ್ ನ್ಯೂಸ್
13-05-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 15 ರಂದು ಜರ್ಮನಿಯಿಂದ ಬೆಂಗಳೂರಿಗೆ ಹಿಂತಿರುಗಲು ಕಾಯ್ದಿರಿಸಿದ್ದ ವಿಮಾನದ ಟಿಕೆಟನ್ನು ದಿಢೀರ್ ರದ್ದುಗೊಳಿಸಿದ್ದು ಬಂಧನದ ನಿರೀಕ್ಷೆ ಇಟ್ಟುಕೊಂಡಿದ್ದ ಎಸ್ಐಟಿ ತಂಡವನ್ನು ತಬ್ಬಿಬ್ಬುಗೊಳಿಸಿದ್ದಾರೆ.
ಈವರೆಗೂ ಮೇ 15ರ ವಿಮಾನ ಟಿಕೆಟ್ ಬುಕ್ ಆಗಿದ್ದರಿಂದ ಇನ್ನೆರಡು ದಿನದಲ್ಲಿ ಬರಬಹುದು ಎಂಬ ನಿರೀಕ್ಷೆ ಇತ್ತು. ಹಾಗಿದ್ದರೂ ಎಸ್ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪ್ರಜ್ವಲ್ ವಿದೇಶದಲ್ಲಿ ಅಡಗಿರುವ ಜಾಗವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಮೇ 3ರಂದು ನಿಗದಿಯಾಗಿದ್ದ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಎರಡು ದಿನ ಇರುವಾಗ ಟಿಕೆಟ್ ರದ್ದುಗೊಳಿಸಿದ್ದು ಎಸ್ಐಟಿ ತಂಡವನ್ನು ದಿಕ್ಕು ತಪ್ಪಿಸಲು ಪ್ರಜ್ವಲ್ ಈ ರೀತಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ, ಪ್ರಜ್ವಲ್ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವ ಮುನ್ನವೇ ಪ್ರಜ್ವಲ್ ಜರ್ಮನಿಗೆ ಹಾರಿದ್ದರು. ಆನಂತರ, ಬೇರೆ ದೇಶಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ ಯಾವ ದೇಶದಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರೂ ಪ್ರಜ್ವಲ್ ವಿಮಾನ, ಹಡಗಿನಲ್ಲಿ ಪ್ರಯಾಣಿಸದ ಹೊರತು ಎಲ್ಲಿದ್ದಾರೆಂಬ ಬಗ್ಗೆ ಸಣ್ಣ ಸುಳಿವು ಕೂಡ ಎಸ್ಐಟಿಗೆ ಸಿಗಲ್ಲ. ಸದ್ಯಕ್ಕೆ ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್ಐಟಿಗೆ ಸವಾಲಾಗಿದೆ.
Prajwal Revanna, an accused in the pornographic pen drive case, has suddenly cancelled the ticket of a flight he had booked to return to Bengaluru from Germany on May 15, much to the consternation of the SIT team that was expecting his arrest.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm