ಬ್ರೇಕಿಂಗ್ ನ್ಯೂಸ್
13-05-24 05:57 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ವಿಧಾನ ಪರಿಷತ್ತಿನ ಚುನಾವಣೆಯ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದ ಬಿಜೆಪಿಯಲ್ಲಿ ಗೊಂದಲ ಎದ್ದಿದೆ. ಹೈಕಮಾಂಡ್ 5-1ರ ಮೈತ್ರಿ ಸೂತ್ರದಡಿ ಟಿಕೆಟ್ ಘೋಷಣೆ ಮಾಡಿದ್ದರೆ, ರಾಜ್ಯ ನಾಯಕರು 4-2ರ ಸೂತ್ರ ಮುಂದಿಟ್ಟು ಎರಡು ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟು ಕೊಡಲು ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಪಾಲಿಗೆ ಬಿಟ್ಟುಕೊಡಲು ಸಂಧಾನ ಸೂತ್ರ ರಚಿಸಿದ್ದಾರೆ.
ಆದರೆ, ಈ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಹೈಕಮಾಂಡ್ ಎಬಿವಿಪಿ ಹಿನ್ನೆಲೆಯ ಈ.ಸಿ. ನಿಂಗರಾಜು ಗೌಡ ಅವರ ಹೆಸರು ಘೋಷಣೆ ಮಾಡಿದೆ. ನಿಂಗರಾಜು ತಾನೇ ಅಧಿಕೃತ ಅಭ್ಯರ್ಥಿಯೆಂದು ಮಾಧ್ಯಮಕ್ಕೆ ಹೇಳಿಕೆಯನ್ನು ನೀಡಿದ್ದರೆ, ಜೆಡಿಎಸ್ ನಾಯಕರು ಈ ಕ್ಷೇತ್ರದಲ್ಲಿ ತಮ್ಮದೇ ಅಭ್ಯರ್ಥಿ ಇಳಿಸುತ್ತೇವೆಂದು ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿರುವ ನಿಂಗರಾಜು ಗೌಡ, ಬಿಜೆಪಿ ಒಂದು ಬಾರಿ ಟಿಕೆಟ್ ಫೈನಲ್ ಮಾಡಿದ ಮೇಲೆ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಮಂಡ್ಯದಲ್ಲಿ ಕುಮಾರಸ್ವಾಮಿ ಪರವಾಗಿ ನಾವು ಕೆಲಸ ಮಾಡಿದ್ದೇವೆ. ಜೆಡಿಎಸ್ ನಾಯಕರು ನನ್ನ ಪರವಾಗಿ ಇದ್ದಾರೆಂಬ ವಿಶ್ವಾಸ ಇದೆ. ಮೇ 15ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ, ಜೆಡಿಎಸ್ ನಾಯಕ ಶಾಸಕ ಸಾರಾ ಮಹೇಶ್ ಪ್ರತಿಕ್ರಿಯಿಸಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಮ್ಮದೇ ಪ್ರಾಬಲ್ಯ ಇದೆ, ಮೈತ್ರಿ ಸೂತ್ರದಡಿ ನಾವೇ ಈ ಸೀಟು ಪಡೆಯುತ್ತೇವೆ. ಕ್ಷೇತ್ರದಲ್ಲಿ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಮತ್ತು ವಿವೇಕಾನಂದ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಒಬ್ಬರಿಗೆ ಟಿಕೆಟ್ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
![]()
ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್. ಅಶೋಕ್, 4-2ರ ಮೈತ್ರಿ ಸೂತ್ರವನ್ನು ಪ್ರತಿಪಾದಿಸುತ್ತ ಬಂದಿದ್ದರು. ಆದರೆ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸಿನಿಂದಾಗಿ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಬೇಡ ಎನ್ನುವುದು ಬಿಜೆಪಿ ಒಳಗಿನ ಇತರೇ ನಾಯಕರ ಮಾತಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಮೈತ್ರಿ ಮಾತುಕತೆ ಆಗಿರುವುದರಿಂದ ಎರಡು ಮಾತು ಆಡುವುದು ಸಾಧ್ಯವಿರಲಿಲ್ಲ. ಹಾಗಾಗಿ, ಹಾಲಿ ಎಂಎಲ್ಸಿ ಭೋಜೇಗೌಡರ ನೈರುತ್ಯ ಶಿಕ್ಷಕರ ಕ್ಷೇತ್ರ ಹೊರತುಪಡಿಸಿ ಉಳಿದ ಐದು ಕ್ಷೇತ್ರಗಳಿಗೂ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕಾಗಿ ಪಟ್ಟು ಹಿಡಿದಿದ್ದು, ಯಡಿಯೂರಪ್ಪ ಆ ಕ್ಷೇತ್ರವನ್ನು ಬಿಟ್ಟು ಕೊಡಲು ಮುಂದಾಗಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಈ ಕ್ಷೇತ್ರದ ಅಭ್ಯರ್ಥಿ ಘೋಷಣೆಯನ್ನು ಪೆಂಡಿಂಗ್ ಮಾಡುವಂತೆ ಸೂಚನೆ ನೀಡಿದೆ.
ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯಲ್ಲಿ ಒಂದು ಬಾರಿ ಟಿಕೆಟ್ ಘೋಷಣೆಯಾದ ಬಳಿಕ ನಿರಾಕರಣೆ ಮಾಡುವುದು, ಅಭ್ಯರ್ಥಿ ಬದಲಿಸುವ ಸಂಪ್ರದಾಯ ಇಲ್ಲ. ಈ ರೀತಿ ಮಾಡಿದರೆ ಪಕ್ಷದ ಪಾಲಿಗೆ ಹಿನ್ನಡೆಯ ಸಂದೇಶಕ್ಕೆ ಕಾರಣವಾಗುತ್ತದೆ. ಪ್ರಾದೇಶಿಕ ಪಕ್ಷದ ಎದುರು ಮಂಡಿಯೂರಿದಂತೆ ಎನ್ನುವ ಭಾವನೆ ಕಾರ್ಯಕರ್ತರಲ್ಲಿ ಬರುತ್ತದೆ. ಈ ರೀತಿಯ ವಿಶ್ಲೇಷಣೆ ಸದ್ಯ ಪಕ್ಷದಲ್ಲಿದ್ದು, ಸೀಟು ಬಿಟ್ಟುಕೊಟ್ಟರೂ ಮೈತ್ರಿಯಲ್ಲಿ ಒಮ್ಮತ ಇಲ್ಲದೆ ಮಂಡ್ಯ, ಮೈಸೂರಿನಲ್ಲಿ ಅಸಮಾಧಾನ ಮೂಡುವ ಸಾಧ್ಯತೆಯೇ ಹೆಚ್ಚಿದೆ.
Confusion in the council election alliance formula; JDS folds for two seats in parishad elections.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm