ಬ್ರೇಕಿಂಗ್ ನ್ಯೂಸ್
14-05-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.14: ರೇವಣ್ಣ ಅವರಿಗೆ ಜಾಮೀನು ದೊರೆತಿದೆ ಎಂದು ಸಂತಸ ಪಡುವ ಹಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಪಡುವುದು ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ. ಎಸ್ಐಟಿ ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆಯಾ? ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಿಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ಏಪ್ರಿಲ್ 22ರಂದು ದಾಖಲಾದ ಎಫ್ಐಆರ್ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ನವೀನ್ ಗೌಡ ನಮ್ಮ ಪಕ್ಷದವರಿಗೆ ಪೆನ್ಡ್ರೈವ್ ಕೊಟ್ಟಿದ್ದೆ ಎಂದು ಹೇಳಿದ್ದಾನೆ. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಲೇ ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ. ನನ್ನ ಬಳಿ ಎಲ್ಲ ದಾಖಲೆಗಳಿವೆ. ಈಗಲೇ ನಾನು ಏನೂ ಹೇಳಲ್ಲ ಎಂದು ತಿಳಿಸಿದರು. ರೇವಣ್ಣ ಕುಟುಂಬ ಮುಗಿಸಲು ಪ್ಲ್ಯಾನ್ ಮಾಡ್ತಿದ್ದೇನೆಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ನಾನು ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಪೆನ್ಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ನಡೆದಿದೆ. ಇನ್ನೂ ಸಮಯ ಇದೆ, ನಾನು ದುಡುಕಲ್ಲ ಎಂದರು.
Former Chief Minister and JD(S) state chief H.D. Kumaraswamy said on Tuesday that this was not the time for him and the party to celebrate.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm