ಬ್ರೇಕಿಂಗ್ ನ್ಯೂಸ್
16-05-24 12:11 am HK News Desk ಕರ್ನಾಟಕ
ಮೈಸೂರು, ಮೇ.16: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಿ ಫಾರಂ ಇಲ್ಲದೆ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದು ಕುತೂಹಲ ಮೂಡಿಸಿದ್ದಾರೆ.
ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ.ಸಿ ನಿಂಗರಾಜೇಗೌಡ ಅವರ ಹೆಸರು ಘೋಷಿಸಲಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ಬುಧವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ, ಮಾತನಾಡಿದ ಡಾ.ಈ.ಸಿ ನಿಂಗರಾಜೇಗೌಡ, ನಾಳೆ ಬೆಳಗ್ಗೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ನನ್ನ ಹೆಸರು ಅಂತಿಮಗೊಳಿಸಲಾಗಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ಸಿಗೂ ಬಂಡಾಯದ ಬಿಸಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ಗಾಗಿ ವಿವೇಕಾನಂದ ಹಾಗೂ ಕೆ.ಟಿ ಶೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ. ಇದರಿಂದ ಸಿಟ್ಟುಗೊಂಡ ಕೆ.ಟಿ ಶ್ರೀಕಂಠೇಗೌಡ ಬಂಡಾಯ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶೀಯಲ್ ಮಿಡಿಯಾದಲ್ಲಿ ಪ್ರತಿಕ್ರಿಯಿಸಿರುವ ಅವರು, ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಮತ್ತೊಮ್ಮೆ ನಿಮ್ಮ ಬಳಿ ಬರುತ್ತಿದ್ದೇನೆ. ನನ್ನುನ್ನು ಬೆಂಬಲಿಸಿ. ನಾಳೆ(ಮೇ 16 ) ಬೆಳಿಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
The Bharatiya Janata Party (BJP), which had announced candidates to five of the six Legislative Council seats leaving one to its alliance partner the Janata Dal (Secular), will likely give up another seat to its partner making the seat-sharing formula to 4-2. Six Council seats go to polls on June 3.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm