ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm