ಬ್ರೇಕಿಂಗ್ ನ್ಯೂಸ್
16-05-24 10:37 pm HK News Desk ಕರ್ನಾಟಕ
ಮೈಸೂರು, ಮೇ 16: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಗುರುವಾರ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅದಕ್ಕೂ ಮುನ್ನ ಬೆಂಬಲಿಗರ ಸಭೆ ಕರೆದು ಎಳೆದಾಟ ಉಂಟಾಗಿ ಆಸ್ಪತ್ರೆ ಸೇರಿದ ಘಟನೆ ನಡೆಯಿತು. ಇದರಿಂದಾಗಿ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ.
ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉದ್ಯಮಿ ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಬಿ ಫಾರಂ ನೀಡಿದ್ದರು. ಇದರಿಂದ ಜೆಡಿಎಸ್ ನಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಕಂಠೇಗೌಡ ತೀವ್ರ ಬೇಸರಗೊಂಡು ಬಂಡಾಯ ಸ್ಪರ್ಧಿಸಲು ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದ ಗೌಡರು, ಪಕ್ಷೇತರ ಸ್ಪರ್ಧೆಯ ಬಗ್ಗೆ ಹೇಳಿಕೆ ನೀಡಿದ್ದರು.

ಇದೇ ವೇಳೆ, ಜೆಡಿಎಸ್ ಕಾರ್ಯಕರ್ತರು ಶ್ರೀಕಂಠೇಗೌಡ ನಿರ್ಧಾರವನ್ನು ವಿರೋಧಿಸಿದ್ದು, ಪಕ್ಷೇತರ ಸ್ಪರ್ಧೆ ಮಾಡದಂತೆ ಎಳೆದಾಡಿದ್ದಾರೆ. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಎಳೆದಾಟದಿಂದಾಗಿ ದೈಹಿಕವಾಗಿ ಬಳಲಿದಂತಾಗಿ ಗಾಯಗೊಂಡ ಶ್ರೀಕಂಠೇಗೌಡರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಿಂದ ಇತ್ತ ಬಂಡಾಯ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಮೇ 16 ಕಡೆಯ ದಿನವಾಗಿತ್ತು.
ವಿವೇಕಾನಂದ ಆಸ್ತಿ 124 ಕೋಟಿ
ಇದೇ ವೇಳೆ, ಜೆಡಿಎಸ್ ಬಿ ಫಾರಂ ಪಡೆದ ಉದ್ಯಮಿ ವಿವೇಕಾನಂದ ಮೈಸೂರಿನ ಪ್ರಾದೇಶಿಕ ಆಯುಕ್ತರಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ 124.65 ಕೋಟಿ ಇದೆಯೆಂದು ಹೇಳಿಕೊಂಡಿದ್ದಾರೆ. ವಿವೇಕಾನಂದ ಬಳಿ 16.9 ಕೋಟಿ ಚರಾಸ್ತಿ ಇದೆ, ಒಂದು ಆಡಿ ಕಾರು, ಎರಡು ರಾಯಲ್ ಎನ್ ಫೀಲ್ಡ್ ಬೈಕ್ ಇದೆ. ಇವರ ಬಳಿ ಒಂದೂವರೆ ಕೇಜಿ ಚಿನ್ನ, 30 ಕೇಜಿ ಬೆಳ್ಳಿ ಇದೆ. ಇದೇ ವೇಳೆ, ಪತ್ನಿ ಬಳಿ 61 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಒಂದು ಕೇಜಿ ಚಿನ್ನ, ಹತ್ತು ಕೇಜಿ ಬೆಳ್ಳಿ, ಮರ್ಸಿಡಿಸ್ ಬೆಂಜ್ ಕಾರನ್ನು ಹೊಂದಿದ್ದಾರೆ. ಇದಲ್ಲದೆ, ವಿವೇಕಾನಂದ ಬಳಿ ನೂರು ಕೋಟಿ ಮೌಲ್ಯದ ಕೃಷಿ ಜಮೀನು, ಕಮರ್ಶಿಯಲ್ ಕಟ್ಟಡಗಳಿವೆ. ಬೆಂಗಳೂರು, ಮೈಸೂರಿನಲ್ಲಿ ಎರಡೆರಡು ವಾಸದ ಮನೆಗಳಿವೆ.
Disgruntled JD(S) leader and former MLC K.T. Srikantegowda called for a meeting of his supporters after being denied the ticket to contest. The Constituency, spanning Mysuru, Mandya, Hassan and Chamarajanagar districts, has over 20,000 voters.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm