ಬ್ರೇಕಿಂಗ್ ನ್ಯೂಸ್
17-05-24 10:47 pm HK News Desk ಕರ್ನಾಟಕ
ಹಾಸನ, ಮೇ.17: ಅಶ್ಲೀಲ ಪೆನ್ ಡ್ರೈವ್ ವಿಷಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನನ್ನನ್ನು ಕರೆದು ನೂರು ಕೋಟಿಯ ಆಫರ್ ನೀಡಿದ್ದರು ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ದೇವರಾಜೇಗೌಡರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಕಾರಾಗೃಹಕ್ಕೆ ತೆರಳುವ ಸಂದರ್ಭದಲ್ಲಿ ಮಾಧ್ಯಮದ ಮುಂದೆ ಆರೋಪಗಳ ಸುರಿಮಳೆಗೈದರು. " ನೀನು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯೇ
ಪೆನ್ಡ್ರೈವ್ ಹಂಚಿದರು ಎಂದು ಹೇಳು. ನಿನಗೆ ಸಮಸ್ಯೆ ಆಗಲ್ಲ, ಸೆಕ್ಯೂರ್ ಮಾಡ್ತಿನಿ ಅಂತ ಡಿಕೆ ಶಿವಕುಮಾರ್ ಹೇಳಿದ್ದರು ಎಂಬ ಆರೋಪ ಮಾಡಿದರು.
ಇದಕ್ಕಾಗಿ ದೊಡ್ಡ ಮಟ್ಟದ ಹಣದ ಆಫರ್ ಕೊಟ್ಟರು. ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್ಡ್ರೈವ್ ರೆಡಿ ಮಾಡಿದ್ದೇ ಡಿಕೆ ಶಿವಕುಮಾರ್ ಎಂದು ಆರೋಪಿಸಿದರು.
ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ ಮತ್ತು ಇನ್ನೊಬ್ಬ ಸಚಿವರು ಸೇರಿದಂತೆ ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು. ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ಟರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್ನ 110 ರೂಂಗೆ ಕಳುಹಿಸಿದ್ದರು ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು.
ಚನ್ನರಾಯಪಟ್ಟಣ ವಿಧಾನ ಪರಿಷತ್ ಮಾಜಿ ಸದಸ್ಯ ಗೋಪಾಲಸ್ವಾಮಿಯನ್ನು ಸಂಧಾನಕ್ಕೆ ಕಳುಹಿಸಿ ಐದು ಕೋಟಿ ಕ್ಯಾಶ್ ಕೊಟ್ಟು ಕಳುಹಿಸಿದ್ದರು ಎಂದು ದೂರಿದರು. ನನ್ನ ಬಳಿ ಅವರಿಗೆ ಸಿಕ್ಕಿರುವ ಪೆನ್ ಡ್ರೈವ್ನಲ್ಲಿ ಕಾರ್ತಿಕ್ ಪತ್ನಿ ಕಿಡ್ನಾಪ್ ಪ್ರಕರಣದ ವೀಡಿಯೋ ಇದೆ. ಡಿಕೆ ಶಿವಕುಮಾರ್ ಅವರು ನನ್ನೊಟ್ಟಿಗೆ ಮಾತನಾಡಿರೊ ಆಡಿಯೋ ಇದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಾನು ಬಿಡುಗಡೆಯಾಗಿ ಹೊರಗಡೆ ಬಂದ ದಿನ ಸರ್ಕಾರ ಪತನವಾಗಲಿದೆ ಎಂದರು. ಎಸ್ಐಟಿಗೆ ನನ್ನ ಮನೆಯಲ್ಲಿ ಏನೂ ಸಿಗಲ್ಲ. ನನ್ನ ಬಳಿ ಇರೋ ಸಾಕ್ಷಿ ಎಲ್ಲೋ ಇದೆ. ಸಾಕ್ಷಿಯನ್ನ ಸೇಫಾಗಿ ಇಟ್ಟಿದ್ದೇನೆ ಎಂದ ವಕೀಲ ದೇವರಾಜೇಗೌಡ ಹೇಳಿದರು.
Devaraje Gowda says Dk Shivakumar offered him 100 crores to frame HD Kumaraswamy in prajwal pen drive case. He offered me 5 crore advance also. Soon as I come from jail DK Shivakumar will go to jail he added.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm