ಬ್ರೇಕಿಂಗ್ ನ್ಯೂಸ್
18-05-24 04:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.




ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.
Ksrtc bus accident in Bangalore, bus climbs over bridge after driver looses control. Photos and videos of this has gone viral on social media. Six including driver and conducter have been injured.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm