ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm