ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm