ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm